ಶ್ರೀನಂಜುಂಡೇಶ್ವರ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ಎಸ್.ಕೆ.ಗಂಗಾಧರ್ ಅವರು ನಿರ್ಮಿಸಿರುವ ‘ಅನುಷ್ಕ‘ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ದೇವರಾಜ್ಕುಮಾರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು, ಅರಸಿಕೆರೆ ಹಾಗೂ ಬ್ಯಾಂಕಾಕ್ನಲ್ಲಿ ಚಿತ್ರಕ್ಕೆ ೭೨ದಿನಗಳ ಚಿತ್ರೀಕರಣ ನಡೆದಿದೆ.
ವೀನಸ್ ಮೂರ್ತಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವಿಕ್ರಂ ಸೆಲ್ವ ಸಂಗೀತ ನಿರ್ದೇಶನವಿದೆ. ಶ್ರೀಧರ್ ಸಂಕಲನ, ಅಶೋಕ್, ಸಿದ್ದಾರಾಜು, ನರಸಿಂಹ, ಚಂದ್ರು ಸಾಹಸ ನಿರ್ದೇಶನ, ಅವಿನ್ ನೃತ್ಯ ನಿರ್ದೇಶನ ಹಾಗೂ ಬಾಬುಖಾನ್ ಕಲಾ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಸಾಧುಕೋಕಿಲ, ರೂಪೇಶ್ ಶೆಟ್ಟಿ, ಅಮೃತ, ರೂಪ ಶರ್ಮ, ಬಾಲರಾಜ್, ಆದಿಲೋಕೇಶ್ ಮುಂತಾದವರಿದ್ದಾರೆ.