ಗರುಡ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಕಪಟನಾಟಕ ಪಾತ್ರಧಾರಿ‘ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚೆಗೆ ಯೂಟ್ಯೂಬ್ ನಲ್ಲಿ ವೇಣು ಹಸ್ರಾಳಿ ಬರೆದಿರುವ, ಹರಿಚರಣ್ ಹಾಡಿರುವ ‘ಯಾಕೆ ಅಂತ ಗೊತ್ತಿಲ್ಲ ಕಣ್ರೀ‘ ಹಾಡಿನ ಲಿರಿಕಲ್ ವಿಡಿಯೋ ‘ಆಪರೇಶನ್ ಅಲಮೇಲಮ್ಮ‘ ಖ್ಯಾತಿಯ ರಿಶಿ ಬಿಡುಗಡೆ ಮಾಡಿದ್ದರು.. ಈ ಹಾಡಿನ ಲಿರಿಕಲ್ ವಿಡಿಯೋ ಅಧಿಕ ಜನರಿಂದ ವೀಕ್ಷಣೆಗೊಂಡು ಮೆಚ್ಚುಗೆ ಪಡೆದುಕೊಂಡಿದೆ. ಇದೇ ತಿಂಗಳ ಕೊನೆಗೆ ಚಿತ್ರದ ಆಡಿಯೋ ರಿಲೀಸ್ ಆಗಲಿದೆ.
ಈ ಲಿರಿಕಲ್ ವೀಡಿಯೋದಲ್ಲಿ ತಂತ್ರಜ್ಞರ ಪರಿಚಯನ್ನು ವಿಶೇಷ ರೀತಿ ಮಾಡಲಾಗಿದೆ. ಆಯಾ ತಂತ್ರಜ಼್ಞರ ಫ಼ೇಸ್ಬುಕ್ ಪ್ರೊಫ಼ೆಲ್ ಮೂಲಕ ಅವರನ್ನು ಪರಿಚಯಿಸಲಾಗಿದೆ ಹಾಗೂ ಚಿತ್ರದ ಫ಼ೆಸ್ಬುಕ್ ಸ್ಟೇಟಸ್ನಲ್ಲಿ ಈ ಹಾಡಿನ ಸಾಹಿತ್ಯ ಲಬ್ಯವಿರುತ್ತದೆ ಈ ರೀತಿಯ ಪ್ರಯತ್ನ ಇದೇ ಮೊದಲು ಎನ್ನುತ್ತಾರೆ ಚಿತ್ರದ ನಿರ್ದೇಶಕ ಕ್ರಿಶ್.
ನಿರ್ದೇಶಕ ಕ್ರಿಶ್ ಅವರೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ. ಆದಿಲ್ ನದಾಫ಼್ ಅವರು ಚಿತ್ರಕ್ಕೆ ಸಂಗೀತ ನೀಡಿದ್ದು, ಕ್ರಿಶ್, ವೇಣು ಹಸ್ರಾಳಿ, ಚಾಣಕ್ಯ, ಅನಿರುದ್ಧ್ ಶಾಸ್ತ್ರಿ ಹಾಡುಗಳನ್ನು ರಚಿಸಿದ್ದಾರೆ. ಹರಿಚರಣ್, ಸಿದ್ಧಾರ್ಥ್, ಮಾಧುರಿ ಶೇಷಾದ್ರಿ, ಇಶಾ ಸುಚಿ, ಪವನ್ ಪಾರ್ಥ ಹಾಗೂ ಅನಿರುದ್ದ್ ಶಾಸ್ತ್ರಿ ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ. ಕಿರಣ್ ಚಂದ್ರ ಹಾಗೂ ವೇಣು ಹಸ್ರಾಳಿ ಸಂಭಾಷಣೆ ಬರೆದಿದ್ದಾರೆ. ಪರಮೇಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಶ್ರೀಕಾಂತ್ ಅವರ ಸಂಕಲನವಿದೆ.
ಸಂಗೀತ ಭಟ್, ಬಾಲು ನಾಗೇಂದ್ರ, ಕರಿ ಸುಬ್ಬು, ಶಂಕರ್ ನಾರಾಯಣ್, ಪ್ರಕಾಶ್ ತುಮ್ಮಿನಾಡು, ಉಗ್ರಂ ಮಂಜು, ಜಯದೇವ್, ನವೀನ್ ವಾಸುದೇವ್, ಸುನೀಲ್ ಕುಲಕರ್ಣಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.