`ಸಾವಿತ್ರಿ` ಚಿತ್ರದ ನಾಯಕರಾಗಿ ವಿಜಯ ರಾಘವೇಂದ್ರ ನಟನೆ
Posted date: 15 Sun, Nov 2020 – 05:28:08 PM

 ನಟಿ ತಾರಾ  ಅವರು ಪ್ರಧಾನ ಪಾತ್ರದಲ್ಲಿ ಅಭಿನಯಿಸುತ್ತಿರುವ  ಸಾವಿತ್ರಿ ' ಚಿತ್ರದ ನಾಯಕರಾಗಿ ವಿಜಯ ರಾಘವೇಂದ್ರ ಆಯ್ಕೆಯಾಗಿದ್ದಾರೆ.
 ಈ ಚಿತ್ರದ ಚಿತ್ರೀಕರಣ ನವೆಂಬರ್‌ 19 ರಿಂದ ಆರಂಭವಾಗಲಿದೆ. ಬೆಂಗಳೂರು ಸುತ್ತಮುತ್ತ 45 ದಿನಗಳ ಚಿತ್ರೀಕರಣ ನಡೆಯಲಿದೆ.
ಪಿ.ಎನ್.ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ (ಹೀಲಲ್ಲಿಗೆ) ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪ್ರಶಾಂತ್ ಕುಮಾರ್ ಮೂಲತಃ ಸಾಫ್ಟ್ ವೇರ್ ಉದ್ಯೋಗಿ.
 ಎಸ್ ದಿನೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ‌ ಮಾಡುತ್ತಿದ್ದಾರೆ. 'ಉಯ್ಯಾಲೆ' ನಂತರ ಇದು ನಿರ್ದೇಶಕರಿಗೆ ಎರಡನೇ ಚಿತ್ರ.
ಖ್ಯಾತ ಸಾಹಿತಿ ಹೃದಯ ಶಿವ  ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಗೀತರಚನೆ ಹಾಗೂ ಸಂಭಾಷಣೆ ಕೂಡ ಹೃದಯ ಶಿವ ಅವರದೆ. ಇಷ್ಟು ದಿನ ಗೀತರಚನೆಕಾರರಾಗಿದ್ದ ಹೃದಯ ಶಿವ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.
 *ತಾರಾ, ವಿಜಯ ರಾಘವೇಂದ್ರ,
ಪ್ರಕಾಶ್ ಬೆಳವಾಡಿ, ಸಂಜು ಬಸಯ್ಯ(ಕಾಮಿಡಿ ಕಿಲಾಡಿಗಳು) ,‌ಬೇಬಿ ಲೈಲಾ, ಪ್ರಮೋದ್** ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed