ಆದಿತ್ಯ ಸಿನಿ ಕಂಬೈನ್ಸ್ ಲಾಂಛನದಲ್ಲಿ ಷಣ್ಮುಖ ಜಿ ಬೆಂಡಿಗೇರಿ ಅವರು ನಿರ್ಮಿಸಿರುವ ‘ಕೃಷ್ಣ ಗಾರ್ಮೆಂಟ್ಸ್‘ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಇದೇ ತಿಂಗಳ ೨೧ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಪ್ರಶಾಂತ್ ರಾವ್ ವರ್ಕು ಅವರು ನಿರ್ಮಾಣದ ನಿರ್ವಹಣೆಯ(ಎಕ್ಸಿಕ್ಯೂಟಿವ್ ಪ್ರೊಡ್ಯುಸರ್) ಜವಾಬ್ದಾರಿ ಹೊತ್ತಿದ್ದಾರೆ.
ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ. ಹಾಸನ, ದೊಡ್ದಬಳ್ಳಾಪುರ, ಬೆಂಗಳೂರು, ಶ್ರವಣ ಬೆಳಗೊಳ, ಚನ್ನಪಟ್ಟಣದಲ್ಲಿ ೩೫ದಿನಗಳ ಕಾಲ ಚಿತ್ರೀಕರಣ ನಡೆದಿದೆ.
‘ಶ್ರೀಮಾನ್ ಶ್ರೀಮತಿ‘ ಧಾರಾವಾಹಿ ಖ್ಯಾತಿಯ ಭಾಸ್ಕರ್ ನೀನಾಸಂ ಚಿತ್ರದ ನಾಯಕರಾಗಿ ನಟಿಸಿದ್ದು, ‘ಬ್ರಹ್ಮಾಸ್ತ್ರ‘ ಧಾರಾವಾಹಿಯ ರಶ್ಮಿತ ನಾಯಕಿಯಾಗಿ ಅಭಿನಯಿಸಿದ್ದಾರೆ. ಚಂದನ್ ಗೌಡ(ಲಕ್ಷ್ಮೀ ಬಾರಮ್ಮ), ರಾಜೇಶ್ ನಟರಂಗ, ರಜನಿಕಾಂತ್, ವರ್ಧನ್ ತೀರ್ಥಹಳ್ಳಿ, ಹೆಚ್.ಎಂ.ಟಿ.ವಿಜಯ್, ಕುಲ್ದೀಪ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಚಿದಾನಂದ್ ಹಾಗೂ ಚಂದ್ರಶೇಖರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಅವರ ಸಂಕಲನವಿದೆ. ನಾದಬ್ರಹ್ಮ ಹಂಸಲೇಖ ಅವರ ಶಿಷ್ಯ ರಘು ಧನ್ವಂತ್ರಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.