ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಂii ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪ್ರಶಸ್ತಿಗಳ ವಿವರ
Posted date: 09 Wed, Jan 2019 – 09:13:51 PM

ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ.ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ ೨೫ವರ್ಷ ತುಂಬಿದ ಸುಸಂದರ್ಭದಲ್ಲಿ ಅನ್ನದಾತರಾದ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಎರಡು ಪ್ರಶಸ್ತಿಯೊಂದಿಗೆ ಆರಂಭವಾದ ಈ ಸಮಾರಂಭಕ್ಕೆ ಆಗಮಿಸಿದ ಗಣ್ಯರು ನಮ್ಮ ಸಂಸ್ಥೆಯ ಮೂಲಕ ಪ್ರಶಸ್ತಿ ನೀಡಲು ಮುಂದಾದರು.  ಈಗ ಪ್ರಶಸ್ತಿಗಳ ಸಂಖ್ಯೆ ೧೧ಕ್ಕೇರಿದೆ. ಇಂದು ನಮ್ಮೊಂದಿಗೆ ಪ್ರಸಿದ್ದ ನಟರು, ಪತ್ರಕರ್ತರು ಹಾಗೂ ನಿರ್ದೇಶಕರು ಪ್ರಶಸ್ತಿ ಸಮಾರಂಭಕ್ಕೆ ಜೊತೆಯಾಗಿ ಈ ಸಂಸ್ಥೆಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.
ಸಂಸ್ಥೆಯ ೪೨ನೇ ವಾರ್ಷಿಕೋತ್ಸವ ಹಾಗೂ ೧೮ನೇ ವರ್ಷದ  ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ  ೨೫ರ ಶುಕ್ರವಾರ ಸಂಜೆ ೫.೩೦ಕ್ಕೆ ಚಾಮರಾಜಪೇಟೆಯ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಲಿದೆ.

     
                                             ಪ್ರಶಸ್ತಿಗಳ ವಿವರ
ಶ್ರೀ ರಾಕ್‌ಲೈನ್ ವೆಂಕಟೇಶ್ ಹಿರಿಯ ಚಲನಚಿತ್ರ ನಿರ್ಮಾಪಕರು
(ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)

ಶ್ರೀ ಬನ್ನಂಜೆ ಗೋವಿಂದಾಚಾರ್ ಹಿರಿಯ ಚಲನಚಿತ್ರ ಪತ್ರಕರ್ತರು
(ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)

ಶ್ರೀಮತಿ ಎಸ್.ಜಾನಕಿ ಖ್ಯಾತ ಹಿನ್ನಲೆಗಾಯಕರು
(‘ಡಾ:ರಾಜ್‌ಕುಮಾರ್ ಪ್ರಶಸ್ತಿ ಶ್ರೀಮತಿ ಪಾರ್ವತಮ್ಮ ರಾಜ್‌ಕುಮಾರ್ ಅವರಿಂದ)

ಶ್ರೀಪಿ.ವಾಸು ನಿರ್ದೇಶಕರು
(‘ಯಜಮಾನ ಚಿತ್ರದ ಖ್ಯಾತಿ ‘ಆರ್.ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ ಶ್ರೀಮತಿ ಭಾರತಿ ವಿಷ್ಣುವರ್ಧನ ಅವರಿಂದ)

ಶ್ರೀಮತಿ ಆರೂರು ಸತ್ಯಭಾಮ ಕಲಾವಿದರು
(ಖ್ಯಾತ ಅಭಿನೇತ್ರಿ ಶ್ರೀಮತಿ ಜಯಮಾಲ ಎಚ್.ಎಂ.ರಾಮಚಂದ್ರ ಪ್ರಶಸ್ತಿ)

ಶ್ರೀ ವಾಸುಕಿ ವೈಭವ್ ಅತ್ಯತ್ತಮ ಸಂಗೀತ ನಿರ್ದೇಶನ ‘ಸರ್ಕಾರಿ ಹಿರಿಯ ಪ್ರಥಾಮಿಕ ಶಾಲೆ ಕಾಸರಗೋಡುಚಿತ್ರಕ್ಕಾಗಿ
(ಎಂ.ಎಸ್.ರಾಮಯ್ಯ ಮೀಡಿಯಾ ಅಂಡ್ ಎಂಟರ್‌ಟೈನ್‌ಮೆಂಟ್ ಪ್ರೈ.ಲಿ ಪ್ರಶಸ್ತಿ)

ಶ್ರೀ ರಿಷಬ್ ಶೆಟ್ಟಿ ಅತ್ಯುತ್ತಮ ಕಥಾಲೇಖಕರು  ‘ಸರ್ಕಾರಿ ಹಿರಿಯ ಪ್ರಥಾಮಿಕ ಶಾಲೆ ಕಾಸರಗೋಡುಚಿತ್ರ  (‘ಖ್ಯಾತ ನಿರ್ದೇಶಕ, ನಿರ್ಮಾಪಕ ಶ್ರೀಕೆ.ವಿ.ಜಯರಾಂ ಪ್ರಶಸ್ತಿ ಶ್ರೀಮತಿ ಮೀನಾಕ್ಷಿ ಜಯರಾಂ ಅವರಿಂದ)

ಶ್ರೀ ಬಿ.ಎ.ಮಧು ಅತ್ಯುತ್ತಮ ಸಂಭಾಷಣೆ ‘ಮಾರ್ಚ್ ೨೨ ಚಿತ್ರಕ್ಕಾಗಿ
(‘ಖ್ಯಾತ ಚಿತ್ರ ಸಾಹಿತಿ ಶ್ರೀಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ ಡಾ:ಎಚ್.ಕೆ.ನರಹರಿ ಅವರಿಂದ)

ಶ್ರೀ ಕಾರ್ತಿಕ್ ಸರಗೂರ್ ‘ಜೀರ್ಜಿಂಬೆ  ಹಾಗೂ ಶ್ರೀಮತಿ ಚಂಪಾ ಶೆಟ್ಟಿ (ಅಮ್ಮಚ್ಚಿಯೆಂಬ ನೆನಪು) ಚೊಚ್ಚಲ ಚಿತ್ರದ ನಿರ್ದೇಶನಕ್ಕಾಗಿ
(ರಂಗ ತಜ಼್ಞ, ಹಿರಿತೆರೆ - ಕಿರುತೆರೆ ನಿರ್ದೇಶಕ ಶ್ರೀಬಿ.ಸುರೇಶ್ ಪ್ರಶಸ್ತಿ)
    
ಶ್ರೀಕೆ.ಕಲ್ಯಾಣ್  ‘ಸರ್ಕಾರಿ ಹಿರಿಯ ಪ್ರಥಾಮಿಕ ಶಾಲೆ ಕಾಸರಗೋಡುಚಿತ್ರದ  (ಹೇ ಶಾರದೆ) ಗೀತರಚನೆಗಾಗಿ
(‘ಹಿರಿಯ ಪತ್ರಕರ್ತರಾದ ಶ್ರೀಪಿ.ಜಿ.ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ ಪತ್ರಕರ್ತ ಶ್ರೀ ವಿನಾಯಕರಾಮ್ ಕಲಗಾರು ಅವರಿಂದ )

ಶ್ರೀ ದೊಡ್ದಣ್ಣ  ಹಿರಿಯ ಪೋಷಕ ಕಲಾವಿದರು
(ಹಿರಿಯ ಪತ್ರಕರ್ತ ಸಿ.ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ)


Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed