ಹರೀಶ್‌ರಾಜ್ ಈಗ `ಕಿಲಾಡಿ ಪೊಲೀಸ್`
Posted date: 30 Thu, May 2019 – 08:53:15 AM

ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿ, ಸಿನಿರಸಿಕರ ಮೆಚ್ಚುಗೆಗೆ ಪಾತ್ರರಾಗಿರುವ ನಟ ಹರೀಶ್‌ರಾಜ್ ಕೆಲವು ದಿನಗಳ ನಂತರ ‘ಕಿಲಾಡಿ ಪೊಲೀಸ್‘ ಚಿತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಚಿತ್ರೀಕರಣ ಪೂರ್ಣವಾಗಿದ್ದು, ಸದ್ಯ ಡಿಐ ಅಳವಡಿಸಲಾಗುತ್ತಿದೆ. ಈ ಹಿಂದೆ ಹರೀಶ್‌ರಾಜ್ ೧೬ಪಾತ್ರಗಳಲ್ಲಿ ನಟಿಸಿದ್ದ ಶ್ರೀಸತ್ಯನಾರಾಯಣ ಚಿತ್ರ ಲಿಮ್ಕಾ ದಾಖಲೆಗೆ ಆಯ್ಕೆಯಾಗಿತ್ತು.

ಇತ್ತೀಚೆಗೆ ಖ್ಯಾತ ನಟ ಮೋಹನ್‌ಲಾಲ್ ಪುತ್ರ ನಾಯಕಾನಾಗಿ ನಟಿಸಿರುವ ಚಿತ್ರ ಸೇರಿದಂತೆ ಮಲೆಯಾಳಂನ ಎರಡು ಚಿತ್ರಗಳಲ್ಲಿ ಮುಖ್ಯ ಖಳನಟನ ಪಾತ್ರದಲ್ಲಿ ಹರೀಶ್ ರಾಜ್ ಕಾಣಿಸಿಕೊಂಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಆರೆಂಜ್‘ ಚಿತ್ರದ ನಂತರ ‘ಕಿಲಾಡಿ ಪೊಲೀಸ್‘ ಚಿತ್ರದಲ್ಲಿ ಅಭಿನಯಿಸಿರುವ ಹರೀಶ್‌ರಾಜ್ ಈ ಚಿತ್ರದ ನಿರ್ದೇಶಕರೂ ಹೌದು.

ಹೆಚ್.ಆರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ೪೦ದಿನಗಳ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರದ ಟೀಸರ್ ಬಿದುಗಡೆಯಾಗಲಿದೆ..

ಅಪ್ಪ-ಮಗನ ಭಾಂದವ್ಯ, ಹಾಸ್ಯ, ಸುಮಧುರ ಹಾಡುಗಳು ಹಾಗೂ ಮೈಜುಂ ಎನಿಸುವ ಸಾಹಸ ಸನ್ನಿವೇಶಗಳು ‘ಕಿಲಾಡಿ ಪೊಲೀಸ್‘ ಚಿತ್ರದಲ್ಲಿದೆ ಎನ್ನುತ್ತಾರೆ ನಿರ್ದೇಶಕ ಹರೀಶ್‌ರಾಜ್.

ಎಲ್ವಿನ್ ಜೋಶ್ವ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ದೀಪಕ್ ಕುಮಾರ್ ಅವರ ಛಾಯಾಗ್ರಹಣವಿದೆ. ಸುರೇಶ್-ಜೀವನ್ ಸಂಕಲನ, ಡಿಫ಼ರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ವಿ.ಮನೋಹರ್, ಸಂತೋಷ್ ನಾಯಕ್ ಹಾಗೂ ಹರೀಶ್ ರಾಜ್ ಬರೆದಿದ್ದಾರೆ.

ಹರೀಶ್‌ರಾಜ್ ಅವರಿಗೆ ನಾಯಕಿಯಾಗಿ ಸಾನ್ವಿ ಪೊನ್ನಮ್ಮ ನಟಿಸಿದ್ದಾರೆ. ಶ್ರೀನಿವಾಸಮೂರ್ತಿ, ಪದ್ಮಾವಾಸಂತಿ, ಸುಚೇಂದ್ರ ಪ್ರಸಾದ್, ಶೋಭರಾಜ್, ಗಿರಿ, ಮುನಿ, ಮೋಹನ್ ಜುನೇಜ, ರಮೇಶ್ ಪಂಡಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed