ಶ್ರೀಹಯಗ್ರೀವ ಕಲಾಚಿತ್ರ ಲಾಂಛನದಲ್ಲಿ ಸಂಪತ್ ಕುಮರ್ ಹಾಗೂ ಶ್ರೀಧರ್ ರೆಡ್ಡಿ ಅವರು ನಿರ್ಮಿಸಿರುವ ಖ್ಯಾತ ನಟ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಾಮ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ ‘ಕುಮಾರಿ ೨೧ ಈ‘ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಶ್ರೀಮಾನ್ ವೆಮುಲ ಅವರು ನಿರ್ದೇಶಿಸಿರುವ ಈ ಚಿತ್ರಕ್ಕೆ ಸುಕುಮಾರ್ ಕಥೆ, ಚಿತ್ರಕಥೆ ಬರೆದಿದ್ದಾರೆ. ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ. ಸಾಗರ್ ಮಹತಿ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ರಾಮಿ ರೆಡ್ಡಿ ಅವರ ಛಾಯಾಗ್ರಹಣ ಹಾಗೂ ಬಾಬು ಖಾನ್ ಅವರ ಕಲಾ ನಿರ್ದೇಶನವಿದೆ. ಪ್ರಣಾಮ್ ದೇವರಾಜ್, ನಿಧಿ ಕುಶಾಲಪ್ಪ. ರವಿಕಾಳೆ, ಅವಿನಾಶ್, ಉಮೇಶ್, ಸಂಗೀತ, ರಿತೀಶ್, ಅಕ್ಷಯ್, ಮನೋಜ್, ಚಿದಾನಂದ್, ಅಪೂರ್ವ ಗೌಡ, ವಾಣಿಶ್ರೀ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.