ಶ್ರೀಮಂತ್ರಾಲಯ ಕಂಬೈನ್ಸ್ ಲಾಂಛನದಲ್ಲಿ ಬಿ.ಬಸವರಾಜ್ ಹಾಗೂ ಬಿ.ಕೆ.ಗಂಗಾಧರ್ ನಿರ್ಮಿಸುತ್ತಿರುವ ‘ಜರಾಸಂಧ ಚಿತ್ರಕ್ಕೆ ವಿಜಯ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ.
ಸಾಹಸ ಪ್ರಧಾನ ಈ ಚಿತ್ರದ ನಾಯಕನಾಗಿ ವಿಜಯ್ ಅಭಿನಯಿಸುತ್ತಿದ್ದಾರೆ. ಪ್ರಣಿತಾ ನಾಯಕಿಯಾಗಿರುವ ‘ಜರಾಸಂಧ ಚಿತ್ರದ ತಾರಾಬಳಗದಲ್ಲಿ ದೇವರಾಜ್, ರೂಪಾದೇವಿ, ಜೆ.ಕೆ, ರಂಗಾಯಣ ರಘು, ಸ್ವಯಂವರ ಚಂದ್ರು, ಚೇತನ್ ಮುಂತಾದವರಿದ್ದಾರೆ.
ಶಶಾಂಕ್ ನಿರ್ದೇಶನದ ಈ ಚಿತ್ರಕ್ಕೆ ಬೆಂಗಳೂರು, ಮಂಗಳೂರು, ಚಾಲುಕುಡಿ ಜಲಪಾತ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಲಕ್ಷಾಂತರ ಜನ ಸೇರುವ ಮುಲ್ಕಿ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಚಿತ್ರೀಕರಣ ಮಾಡಿರುವುದು ಚಿತ್ರದ ವಿಶೇಷಗಳಲೊಂದು.
ನಿರ್ದೇಶಕರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಶೇಖರ್ಚಂದ್ರರ ಛಾಯಾಗ್ರಹಣವಿದೆ. ಅರ್ಜುನ್ ಸಂಗೀತ, ಶ್ರೀ ಸಂಕಲನ, ಹರ್ಷ ನೃತ್ಯ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ಅನಿಲ್ ಅವರ ನಿರ್ಮಾಣ ನಿರ್ವಹಣೆ ‘ಜರಾಸಂಧ ಚಿತ್ರಕ್ಕಿದೆ.