?ಪ್ರೀತ್ಸೆ ಪ್ರೀತ್ಸೆ ಚಿತ್ರೀಕರಣ ಪೂರ್ಣ
Posted date: 22/April/2009

ಸದ್ದಿಲ್ಲದೆ ಆರಂಭವಾದ ಚಿತ್ರ ‘ಪ್ರೀತ್ಸೆ ಪ್ರೀತೆ. ಬೆಂಗಳೂರು ಸೇರಿದಂತೆ ವಿವಿಧ ರಮ್ಯ ತಾಣಗಳಲ್ಲಿ ಚಿತ್ರಕ್ಕೆ ಚಿತ್ರೀಕರಣ ನಡೆಸಿರುವ ನಿರ್ದೇಶಕ ಮಾದೇಶ್, ಕವಿರಾಜ್ ರಚಿಸಿರುವ ‘ಸುಂದರ ಸುಂದರ ಚಂದಿರ ನೀ ಸುಂದರ - ಸಾವಿರ ಸಾವಿರ ಸ್ವರ್ಗವು ನೀ ಸುಂದರ ಎಂಬ ಗೀತೆಯನ್ನು ಚಿತ್ರೀಕರಿಸಿಕೊಳ್ಳುವುದರ ಮೂಲಕ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ನಾಯಕ ಯೋಗೀಶ್ ಹಾಗೂ ಪ್ರಜ಼್ಞ ಅಭಿನಯಿಸಿದ್ದ ಈ ಗೀತೆಗೆ ಇಮ್ರಾನ್ ನೃತ್ಯ ಸಂಯೋಜಿಸಿದ್ದಾರೆ.
    ಮೋಹನ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮೋಹನ್ ಅರ್ಪಿಸಿ, ಕೃಷ್ಣಯ್ಯ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕ ಕೆ.ಮಾದೇಶ್ ಚಿತ್ರಕತೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಹಿಂದೆ ‘ಗಜ ಎಂಬ ಯಶಸ್ವಿ ಚಿತ್ರವನ್ನು ನಿರ್ದೇಶಿಸಿದ ನಿರ್ದೇಶಕರಿಗೆ ಇದು ದ್ವಿತೀಯ ಚಿತ್ರ. ಈ ಚಿತ್ರ ಕೂಡ ಉತ್ತಮ ಕಥೆಯಿಂದ ಕೂಡಿದ್ದು ಚಿತ್ರರಸಿಕರಿಗೆ ಮೆಚ್ಚುಗೆಯಾಗಲಿದೆ ಎನ್ನುತ್ತಾರೆ ಮಾದೇಶ್. ಚಿತ್ರೀಕರಣ ಪೂರ್ಣವಾಗಿರುವ ಚಿತ್ರಕ್ಕೆ ಸದ್ಯದಲ್ಲೇ ಮಾತುಗಳ ಜೋಡಣೆ ಪ್ರಕ್ರಿಯೆ ಆರಂಭಿಸುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ  
   ಅನುಪ್ ಸೀಳಿನ್ ಸಂಗೀತ, ವೀನಸ್ ಮೂರ್ತಿ ಛಾಯಾಗ್ರಹಣ, ತ್ರಿಭುವನ್, ಇಮ್ರಾನ್ ನೃತ್ಯ, ತಿರುಪತಿ ರೆಡ್ಡಿ ಸಂಕಲನ, ಕೆ.ವಿ.ರಾಜು ಸಂಭಾಷಣೆ, ಸುರೇಶ್ ಗೋಸ್ವಾಮಿ ಕಥೆ-ಸಹನಿರ್ದೇಶನ ಹಾಗೂ ಚಂದ್ರಪ್ಪನವರ ನಿರ್ಮಾಣ ನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಯೋಗೀಶ್, ಉದಯ ತಾರಾ, ಪ್ರಜ಼್ಞ, ಜೈಜಗದೀಶ್, ಸಂಗೀತಾ, ರಮೇಶ್ ಭಟ್, ಪಿ.ಎನ್.ಸತ್ಯ ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed