ಅಜಯ್ - ರಾಧಿಕಾಪಂಡಿತ್ ಜೋಡಿಯ, ಶಶಾಂಕ್ ನಿರ್ದೇಶನದ ‘ಕೃಷ್ಣನ್ ಲವ್ ಸ್ಟೊರಿ ಚಿತ್ರಕ್ಕೆ ಆಕಾಶ್ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಂಗೀತ ನಿರ್ದೇಶಕ ವಿ.ಶ್ರೀಧರ್ ಸಾರಥ್ಯದಲ್ಲಿ ಹಿನ್ನಲೆ ಸಂಗೀತ ನೀಡಲಾಗುತ್ತಿದೆ ಹಾಗೂ ಮುಂಬೈ ನಗರದ ಪ್ರಸಿದ್ದ ಸ್ಟುಡಿಯೋದಲ್ಲಿ ಡಿ.ಟಿ.ಎಸ್, ಡಿ ಐ ತಂತ್ರಜ಼್ಞಾನ ಅಳವಡಿಸಲಾಗುತ್ತಿದೆ.
ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ವಿಭಿನ್ನ ಪ್ರೇಮಕಥೆಯುಳ್ಳ ಈ ಚಿತ್ರ ಯುವಪೀಳಿಗೆಗೆ ಹತ್ತಿರವಾಗಲಿದೆ ಎಂದು ಶಶಾಂಕ್ ತಿಳಿಸಿದ್ದಾರೆ. ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದ್ದು ಮುಂದಿನ ತಿಂಗಳು ತೆರೆ ಕಾಣುವ ಸಾಧ್ಯತೆಯಿದೆ.
ಶ್ರೀವೆಂಕಟೇಶ್ವರ ಕೃಪ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್.ಕೆ.ಮೆಹ್ತ ಹಾಗೂ ಮೋಹನ್.ಜಿ.ನಾಯಕ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಯೋಗೀಶ್ ಹುಣಸೂರು ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಎಂ.ಎಲ್.ಪ್ರಸನ್ನ ಸಂಭಾಷಣೆ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮರ ಸಾಹಸವಿರುವ ‘ಕೃಷ್ಣನ್ ಲವ್ ಸ್ಟೊರಿಗೆ ಸಿ.ಎಚ್.ಸುರೇಶ್ ಮತ್ತು ಲೋಕೇಶ್ ಆವರ ಸಹ ನಿರ್ಮಾಣವಿದೆ.