ಈ ವಾರ ತೆರೆಗೆ ?ಸಾರಥಿ`
Posted date: 28 Wed, Sep 2011 ? 11:19:49 AM

ಶ್ರೀಅರಸೇಶ್ವರಿ ಸಿನಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕೆ.ವಿ.ಸತ್ಯಪ್ರಕಾಶ್ ಅವರು ನಿರ್ಮಿಸಿರುವ ‘ಸಾರಥಿ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
     ದರ್ಶನ್ ನಾಯಕರಾಗಿ ನಟಿಸಿರುವ ಈ ಚಿತ್ರದ ಚಿತ್ರೀಕರಣ ಸ್ವದೇಶ ಹಾಗೂ ವಿದೇಶಗಳಲ್ಲಿ ನಡೆದಿದೆ. ದೀಪ ಸನ್ನಿಧಿ, ರಂಗಾಯಣರಘು, ಲೋಹಿತಾಶ್ವ, ಅಜಯ್, ಬುಲೆಟ್ ಪ್ರಕಾಶ್, ಸಿತಾರ, ಶರತ್‌ಕುಮಾರ್, ಶರತ್ ಲೋಹಿತಾಶ್ವ, ಮುನಿ, ಕೋಟೆ ಪ್ರಭಾಕರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
     ದಿನಕರ್‌ತೂಗುದೀಪ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣರ ಸಂಗೀತವಿದೆ. ಕೆ.ಕೃಷ್ಣಕುಮಾರ್ ಛಾಯಾಗ್ರಹಣ, ರವಿವರ್ಮ, ಪಳನಿರಾಜ್ ಸಾಹಸ, ಮದನ್ ಹರಿಣಿ, ಹರ್ಷ ಹಾಗೂ ರಾಮು ನೃತ್ಯ, ದಿನಕರ್ ತೂಗುದೀಪ ಮತ್ತು ಚಿಂತನ್ ಕಥೆ ಹಾಗೂ ಮೂರ್ತಿ ಅವರ ನಿರ್ಮಾಣ ನಿರ್ವಹಣೆ ‘ಸಾರಥಿ’ ಚಿತ್ರಕ್ಕಿದೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed