ನಿರ್ಮಾಪಕ ಕೃಷ್ಣಪ್ರಜ್ವಲ್ ಇತ್ತೀಚೆಗೆ ಮುಖ್ಯಮಂತ್ರಿ ಶ್ರೀಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಡಾ:ವಿಷ್ಣುವರ್ಧನ್ ಅಭಿನಯದ ‘ಆಪ್ತರಕ್ಷಕ‘ ಚಿತ್ರವನ್ನು ವೀಕ್ಷಿಸುವಂತೆ ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಕೃಷ್ಣಪ್ರಜ್ವಲ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಐದುಲಕ್ಷ ರೂಪಾಯಿ ದೇಣಿಗೆ ನೀಡಿದರು.