ಕೋರ್ಟ್ ಡ್ರಾಮ ಜಾನರ್ ನ ``ಯಥಾಭವ``ಚಿತ್ರಕ್ಕೆ ಸೆನ್ಸಾರ್ ಅಸ್ತು
Posted date: 11 Thu, Jan 2024 10:03:56 AM
ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ "ಯಥಾಭವ" ಚಿತ್ರವನ್ನು ವೀಕ್ಷಿಸಿರುವ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಮೂಲಕ "ಯಥಾಭವ" ಜನರ ಮನ ಗೆದ್ದಿದೆ. 
 
ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ -  ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  ದತ್ತಣ್ಣ,  ಬಾಲ ರಾಜವಾಡಿ, ಗೋಪಾಲಕೃಷ್ಣ ದೇಶಪಾಂಡೆ,ಮಾಸ್ಟರ್ ಶಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್, ಮಹೇಶ್ ಕಾಳಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
 
Macht entertainments ಲಾಂಛನದಲ್ಲಿ ಸುಜಾತ ಕುಮಾರಿ ಹಾಗೂ ಅನಿಲ್ ಕುಮಾರ್ ಬಿ.ಎನ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಹರ್ಷ್ ಮಿಶ್ರ ಛಾಯಾಗ್ರಹಣ,  ಹರೀಶ್ ಚೌಧರಿ ಸಂಕಲನ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಸುಚಿತ್ ಚವ್ಹಾಣ್, ನೃತ್ಯ ನಿರ್ದೇಶನ  ಹಾಗೂ ಸ್ಮಿತ ಕುಲಕರ್ಣಿ ಅವರ ಕಲಾ ನಿರ್ದೇಶನವಿದೆ.  ಉತ್ಸವ್ ಶ್ರೇಯಸ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ.  ಸುರೇಶ್ ರೆಡ್ಡಿ ಹಾಗೂ ಅಭಿಷೇಕ್ ಅಕ್ಕಣ್ಣನವರ್ ಹಾಡುಗಳನ್ನು ಬರೆದಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed