ಕನ್ನಡದ ಮೇರು ಪ್ರತಿಭೆಗಳಾದ ಡಾ||ರಾಜಕುಮಾರ್, ಡಾ||ವಿಷ್ಣುವರ್ಧನ್, ಡಾ||ಅಂಬರೀಶ್ ಸೇರಿದಂತೆ ಅನೇಕ ಖ್ಯಾತ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದಲ್ಲಿ ಶ್ರೇಯಸ್ ಮಂಜು ನಾಯಕನಾಗಿ ನಟಿಸುತ್ತಿರುವ "ಒಂದ್ಸಲ ಮೀಟ್ ಮಾಡೋಣ" ಚಿತ್ರ ಆರಂಭವಾಗಿದೆ.
ಚಿಕ್ಕಮಗಳೂರಿನ ಶ್ರೀದೇವಿರಮ್ಮ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ಶ್ರೇಯಸ್ ಮಂಜು ಹಾಗೂ ತಾರಾ ಅನುರಾಧ ಅವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ಸ್ಥಳೀಯ ಶಾಸಕರಾದ ಹೆಚ್ ಡಿ ತಮ್ಮಯ್ಯ ಆರಂಭ ಫಲಕ ತೋರಿದರು. ನಿರ್ಮಾಣ ಸಹಾಯಕ ಮಹದೇವ ಕ್ಯಾಮೆರಾ ಚಾಲನೆ ಮಾಡಿದರು.
"ಒಂದ್ಸಲ ಮೀಟ್ ಮಾಡೋಣ" ಪ್ರೀತಿಯ ಜರ್ನಿ ಎಂದು ಹೇಳುವ ನಿರ್ದೇಶಕರು, ಚಿಕ್ಕಮಗಳೂರಿನಿಂದ ಚಿತ್ರೀಕರಣ ಪ್ರಾರಂಭವಾಗಿ, ಸಕಲೇಶಪುರ, ವಿರಾಜಪೇಟೆ, ಕಣ್ಣೂರು, ಮೈಸೂರು, ಬೆಂಗಳೂರು, ಬೆಳಗಾವಿ ಹಾಗೂ ಗ…