ರಾಮು ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಮು ಅವರು ನಿರ್ಮಿಸಿರುವ ‘ಶಕ್ತಿ ಚಿತ್ರ ಜನವರಿಯಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಭ್ರಷ್ಟಾಚಾರದ ವಿರುದ್ದ ಹೋರಾಡುವ ‘ಶಕ್ತಿಯಾಗಿ ಮಾಲಾಶ್ರೀ ಅಭಿನಯಿಸಿದ್ದಾರೆ. ಸಂಭಾಷಣೆಕಾರರಾಗಿ ಚಿತ್ರರಂಗ ಪ್ರವೇಶಿಸಿದ ಅನಿಲ್ ಈ ಚಿತ್ರದ ನಿರ್ದೇಶಕರು. ವಿಭಿನ್ನ ಕಥೆಯುಳ್ಳ ಈ ಚಿತ್ರಕ್ಕೆ ನಿರ್ದೇಶಕರೇ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.
ರಾಜೇಶ್ ಅವರ ಛಾಯಾಗ್ರಹಣವಿರುವ ‘ಶಕ್ತಿ ಗೆ ವರದನ್ ಸಂಗೀತ ನೀಡಿದ್ದಾರೆ. ಥ್ರಿಲ್ಲರ್ಮಂಜು, ರವಿವರ್ಮ, ರಾಮ್ಲಕ್ಷ್ಮಣ್ ಮತ್ತು ಪಳನಿರಾಜ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಲಕ್ಷ್ಮಣ್ ರೆಡ್ಡಿ ಅವರ ಸಂಕಲನವಿದೆ. ಮಾಲಾಶ್ರೀ, ರವಿಶಂಕರ್, ಶಯಾಜಿರಾವ್ ಶಿಂಧೆ, ವಿನಯಾಪ್ರಸಾದ್, ಅವಿನಾಶ್, ಶರತ್ ಲೋಹಿತಾಶ್ವಾ, ಸಾಧುಕೋಕಿಲಾ, ಕುರಿಗಳು ಪ್ರತಾಪ್ ಮುಂತಾದವರು ತಾರಾಬಳಗದಲ್ಲಿದ್ದಾರೆ.