ದೇಶದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯ ಹೊಸ್ತಿಲಲ್ಲೇ ಕನ್ನಡದಲ್ಲೊಂದು ಹನುಮಾನ್ ಚಾಲಿಸ ಭಕ್ತಿ ಭಾವದ ಹೊನಲಿಗೆ
Posted date: 09 Tue, Jan 2024 10:32:05 AM
ಹೃದಯಸ್ಪರ್ಶ ನೀಡುವ ಹೃತ್ಕಂಠ ಗಾಯಕ ನಮ್ಮ ಕನ್ನಡದ ಹೆಮ್ಮೆಯ ವಿಜಯ್ ಪ್ರಕಾಶ್ ಅವರ ಧ್ವನಿಯಲ್ಲಿ ಕನ್ನಡದಲ್ಲಿ ಮೊದಲನೇ ಹನುಮಾನ ಚಾಲಿಸಾ .
 
ಕೋಟ್ಯಾಂತರ ಜನ ಭಾರತೀಯರು ಕಾತುರದಿಂದ ಕಾಯುತ್ತಿರುವ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠೆ ಸುಸಮಯ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಜಗತ್ತಿಗೆ ಭಕ್ತಿಯ ನಿಯಮ - 
ಏನೆಂದು ತೋರಿಸಿಕೊಟ್ಟ ರಾಮಭಕ್ತ ಹನುಮನ ಕುರಿತಾದ ಹನುಮಾನ್ ಚಾಲಿಸಾ ಬಿಡುಗಡೆಯಾಗಿದೆ. ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಮೂಡಿಬಂದಿರುವ ಹನುಮಾನ್ ಚಾಲಿಸಾ ವನ್ನು ಭಕ್ತಿ ಭಾವದ ಹೊನಲಿಗೆ ಹೃದಯಸ್ಪರ್ಶ ನೀಡುವ ಹೃತ್ಕಂಠ ಗಾಯಕ ನಮ್ಮ ಕನ್ನಡದ ಹೆಮ್ಮೆಯ ವಿಜಯ್ ಪ್ರಕಾಶ್ ಸುಶ್ರಾವ್ಯವಾಗಿ ಭಕ್ತಿಪರವಶರಾಗಿ ಹಾಡಿದ್ದಾರೆ. 

ನಿರ್ಮಾಣ ವೆಂಕಟೇಶ್ ಉತ್ತರಹಳ್ಳಿ ಅವರಿಂದ 

ಇದಕ್ಕೆ ಸಂಗೀತದ ಸ್ಪರ್ಶ ನೀಡಿರುವವರು ಈಗಾಗಲೇ ಕನ್ನಡ ಚಲನಚಿತ್ರ ಕ್ಷೇತ್ರದಲ್ಲಿ ಹಲವು ಚಿತ್ರಗಳಿಗೆ ಸಂಗೀತ ನೀಡಿ ಜನ ಮನ್ನಣೆಗಳಿಸಿರುವ ಲೋಕಿ ತವಸ್ಯ ಅವರು.
 
ಹನುಮನ ಕುರಿತಾಗಿ ಹಲವು ಕೃತಿಗಳು, ಗೀತೆಗಳು, ಭಕ್ತಿಗೀತೆಗಳು ಬಂದಿವೆ. ಆದರೆ ಕನ್ನಡದಲ್ಲೇ ಪ್ರಪ್ರಥಮ ಬಾರಿಗೆ ಹನುಮಾನ್ ಚಾಲಿಸವನ್ನು ಕನ್ನಡಕ್ಕೆ ತರ್ಜುಮೆ ಮಾಡಿ ಒಂದು ಆಲ್ಬಂ ತಯಾರಿಸಲಾಗಿದೆ. ಇಂತಹ ಒಂದು ಅದ್ಭುತ ಕೆಲಸವನ್ನು ಹನುಮನ ಅಪ್ರತಿಮ ಭಕ್ತರಾದ ಶ್ರೀ ವೆಂಕಟೇಶ್  ಉತ್ತರಹಳ್ಳಿ ರವರು ಬಹಳ ಆಸ್ಥೆ ವಹಿಸಿ ತನು ಮನ ಧನವನ್ನು ಸಮರ್ಪಿಸಿ ಲಕ್ಷ್ಮಿ ವೆಂಕಟೇಶ್ವರ RG510 ಉತ್ತರಹಳ್ಳಿ ಬ್ಯಾನರ್ ಅಡಿಯಲ್ಲಿ ಈ ಆಲ್ಬಂ ಅನ್ನು ನಿರ್ಮಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed