ಬೆಂಗಳೂರಿನಲ್ಲಿ ?ಟೋಪಿವಾಲ?ನ ಹಾಡು
Posted date: 12 Wed, Sep 2012 ? 08:41:22 AM

ಆರ್.ಎಸ್.ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸುತ್ತಿರುವ ‘ಟೋಪಿವಾಲ’ ಚಿತ್ರದ ‘ಗಾಲಗಾಲಗಾಲ ವಯಸ್ಸಿಗೆ ಬಂದ ವೆಂಕಟಾಚಲ ಸ್ಟ್ರೈಟ್ ಆಗೋಯ್ತು ನಾಯಿಬಾಲ‘ ಎಂಬ ಹಾಡಿಗೆ ಮುಕ್ತಿಮೋಹನ್ ಹೆಜ್ಜೆ ಹಾಕಿದರು. ಉಪೇಂದ್ರ, ಭಾವನಾ(ಜಾಕಿ), ರಂಗಾಯಣರಘು ಈ ಹಾಡಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ರಾಕ್‌ಲೈನ್ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ ಕ್ಲಬ್ ಸೆಟ್‌ನಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಿತು. ಮುರಳಿ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದರು.
    ಶ್ರೀನಿ ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ಉಪೇಂದ್ರ ಅವರೇ ಬರೆದಿದ್ದಾರೆ. ಶ್ರೀಷ ಅವರ  ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ಶ್ರೀ ಸಂಕಲನ, ರವಿವರ್ಮ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಮೋಹನ್ ಬಿ ಕೆರೆ ಕಲಾನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಭಾವನ(ಜಾಕಿ), ರಂಗಾಯಣರಘು, ರವಿಶಂಕರ್, ಮೈತ್ರೇಯ, ರಾಕ್‌ಲೈನ್ ಸುಧಾಕರ್, ರಾಜುತಾಳಿಕೋಟೆ, ಬಿರಾದಾರ್ ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed