ಜೇನುಕಲ್ಲು ಚಿತ್ರಾಲಯ ಲಾಂಛನದಲ್ಲಿ ಯು.ಇ.ಗಣೇಶ್, ಜಿ.ಕುಮಾರ್, ಜಿ.ಎಸ್.ಜಗದೀಶ್ ಹಾಗೂ ಸುನೀಲ್ಕುಮಾರ್ಶಿಂಧೆ ನಿರ್ಮಿಸುತ್ತಿರುವ ‘ಪ್ರೇಮ ಚಂದ್ರಮ ಚಿತ್ರಕ್ಕೆ ಸಕಲೇಶಪುರದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.
ನಾಯಕನಿಗೆ ನಾಯಕಿಯ ಮೇಲೆ ಪ್ರೀತಿ ಹುಟ್ಟಿದ ಸಮಯ. ಈ ವಿಷಯವನ್ನು ಆಕೆಗೆ ಬಹಳ ದಿನದಿಂದ ಹೇಳಿಬೇಕೆಂದು ಕೊಂಡಿದ ಆತ ಸೂಕ್ತ ಸಮಯ ನೋಡಿ ವಿಷಯ ಪ್ರಸ್ತಾಪಿಸುತ್ತಾನೆ. ನಾಯಕನ ಮಾತಿನಿಂದ ಕೋಪಗೊಂಡ ನಾಯಕಿ ಕಪಾಳಕ್ಕೆ ಹೊಡೆದು, ವೃತ್ತಿಯಲ್ಲಿ ವೈದ್ಯನಾಗಿರುವ ನೀನು ಕಂಡಕಂಡ ಹೆಣ್ಣುಮಕ್ಕಳಿಗೆ ಈ ರೀತಿ ಹೇಳುವುದು ಸರಿಯಲ್ಲ ಎಂದು ಹೇಳಿ ಹೋಗುತ್ತಾಳೆ. ಈ ಸನ್ನಿವೇಶವನ್ನು ‘ಪ್ರೇಮಚಂದ್ರಮ ಚಿತ್ರಕ್ಕಾಗಿ ನಿರ್ದೇಶಕ ಶಾಹುರಾಜ್ ಶಿಂಧೆ ಇತ್ತೀಚೆಗೆ ಸಕಲೇಶಪುರದಲ್ಲಿ ಚಿತ್ರಿಸಿಕೊಂಡರು. ಕಿರಣ್ ಹಾಗೂ ರೇಖಾ ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಸಕಲೇಶಪುರದಲ್ಲಿ ಸುರಿಯುತ್ತಿರುವ ಮಳೆಯಲ್ಲೂ ನಮ್ಮ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಸಾಗಿದೆ ಎಂದು ತಿಳಿಸಿರುವ ನಿರ್ದೇಶಕರು ಕಾಗಿನೆಲೆ ಮುಂತಾದ ಸ್ಥಳಗಳಲ್ಲಿ ಮೊದಲ ಹಂತದ ಚಿತ್ರೀಕರಣ ನಡೆದಿದೆ ಎನ್ನುತ್ತಾರೆ.
ವಿ.ಹರಿಕೃಷ್ಣರ ಸಂಗೀತವಿರುವ ಈ ಚಿತ್ರಕ್ಕೆ ಎಚ್.ಸಿ.ವೇಣು ರವರ ಛಾಯಾಗ್ರಹಣವಿದೆ. ಶಶಿಧರ್ಭಟ್(ಶಿರಸಿ) ಸಂಭಾಷಣೆ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿರ್ಮರ ಸಾಹಸವಿರುವ ‘ಪ್ರೇಮ ಚಂದ್ರಮ ಚಿತ್ರದ ತಾರಾಬಳಗದಲ್ಲಿ ರಘುಮುಖರ್ಜಿ, ಕಿರಣ್(ಹಾಗೆ ಸುಮ್ಮನೆ), ರೇಖಾ, ಶ್ರೀನಾಥ್, ಉಮಾಶ್ರೀ, ಸುಮಿತ್ರ, ಯು.ಇ.ಗಣೇಶ್ ಮುಂತಾದವರಿದ್ದಾರೆ.