ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಿಸುತ್ತಿರುವ ‘ಜಾನು ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ ‘ನೀನೇ ನನ್ನ ಸವಿಗನಸು ಬೇಗ ಬಂದು ಉಪಚರಿಸು ಜಾನು ಮೇರಿ ಜಾನು ಎಂಬ ಗೀತೆಯ ಚಿತ್ರೀಕರಣ ಮೈಸೂರು ಲ್ಯಾಂಪ್ಸ್ನಲ್ಲಿ ಹಾಕಲಾಗಿದ್ದ ವಿಶೇಷ ಸೆಟ್ನಲ್ಲಿ ನಡೆಯಿತು. ಮುರಳಿ ನೃತ್ಯ ಸಂಯೋಜಿಸಿದ ಈ ಗೀತೆಗೆ ಯಶ್ ಹಾಗೂ ದೀಪಾ ಸನ್ನಿಧಿ ಹೆಜ್ಜೆ ಹಾಕಿದರು. ಈ ಹಾಡಿನ ಚಿತ್ರೀಕರಣದೊಂದಿಗೆ ‘ಜಾನು ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಮೇನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಪ್ರೀತಂಗುಬ್ಬಿ ತಿಳಿಸಿದ್ದಾರೆ.
ನಿರ್ದೇಶಕರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಕೃಷ್ಣ ಛಾಯಾಗ್ರಾಹಕರಾಗಿರುವ ‘ಜಾನುಗೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ದೀಪು.ಎಸ್.ಕುಮಾರ್ ಸಂಕಲನ, ಇಸ್ಮಾಯಿಲ್ ಕಲಾ ನಿರ್ದೇಶನ, ಹರ್ಷ, ಮುರಳಿ, ಚಿನ್ನಿಪ್ರಕಾಶ್ ನೃತ್ಯ ನಿರ್ದೇಶನ ಹಾಗೂ ಸುರೇಶ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ಯಶ್, ದೀಪಾಸನ್ನಿಧಿ, ರಂಗಾಯಣರಘು, ಶೋಭ್ರಾಜ್, ಸಂಗೀತ, ಮಧು, ಸಾಧುಕೋಕಿಲಾ, ಲಯೇಂದ್ರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.