`ಪರಮಾತ್ಮ`ತೆರೆಗೆ
Posted date: 06 Thu, Oct 2011 ? 08:58:35 AM

 ಕನ್ನಡ ಚಿತ್ರರಂಗದಲ್ಲಿ ದಾಖಲೆಯ ‘ಮುಂಗಾರು ಮಳೆ ಸುರಿಸಿದ ಯೋಗರಾಜ್ ಭಟ್ ನಿರ್ದೇಶನದಲ್ಲಿ ಪವರ್‌ಸ್ಟಾರ್ ಪುನೀತ್‌ರಾಜಕುಮಾರ್ ನಾಯಕರಾಗಿ ಅಭಿನಯಿಸಿರುವ ‘ಪರಮಾತ್ಮ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
     ಸಕಲೇಶಪುರದಲ್ಲಿ ಆರಂಭವಾದ ಈ ಚಿತ್ರದ ಚಿತ್ರೀಕರಣ ಬೆಂಗಳೂರು, ಕರಾವಳಿ ತೀರ ಸೇರಿದಂತೆ ಕರ್ನಾಟಕದ ರಮ್ಯ ತಾಣಗಳಲ್ಲಿ ನಡೆದಿದೆ.
     ಯೋಗರಾಜ್ ಭಟ್ ಮೂವೀಸ್ ಅರ್ಪಿಸಿ ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಿಸಿರುವ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಸಂಭಾಷಣೆ ಬರೆದಿದ್ದಾರೆ. ಚಿತ್ರಕಥೆ ರಚಿಸುವಲ್ಲಿ ನಿರ್ದೇಶಕರಿಗೆ ಸೂರಿ ಸಾಥ್ ನೀಡಿದ್ದಾರೆ. ವಿ.ಹರಿಕೃಷ್ಣರ ಸಂಗೀತವಿರುವ ಈ ಚಿತ್ರಕ್ಕೆ ಸಂತೋಷ್ ರೈ ಪಾತಾಜೆ ಛಾಯಾಗ್ರಾಹಕರಾಗಿದ್ದಾರೆ. ಶಶಿಧರ್ ಅಡಪರ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ದೀಪು ಎಸ್ ಕುಮಾರ್ ಸಂಕಲನವಿದೆ. ಸುಬ್ರಹ್ಮಣ್ಯ.ಎಂ.ಕೆ ಕಾರ್ಯಕಾರಿ ನಿರ್ಮಾಪಕರಾಗಿರುವ ‘ಪರಮಾತ್ಮನ ನಾಯಕಿಯರಾಗಿ ದೀಪ ಸನ್ನಿಧಿ ಹಾಗೂ ಐಂದ್ರಿತಾ ರೇ ಅಭಿನಯಿಸಿದ್ದಾರೆ. ರಮ್ಯಾಬಾರ್ನಾ, ಶ್ವೇತಾ, ದತ್ತಣ್ಣ, ಅವಿನಾಶ್, ರಂಗಾಯಣರಘು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed