ಕನ್ನಡ ಚಿತ್ರರಂಗದಲ್ಲಿ ದಾಖಲೆಯ ‘ಮುಂಗಾರು ಮಳೆ ಸುರಿಸಿದ ಯೋಗರಾಜ್ ಭಟ್ ನಿರ್ದೇಶನದಲ್ಲಿ ಪವರ್ಸ್ಟಾರ್ ಪುನೀತ್ರಾಜಕುಮಾರ್ ನಾಯಕರಾಗಿ ಅಭಿನಯಿಸಿರುವ ‘ಪರಮಾತ್ಮ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಸಕಲೇಶಪುರದಲ್ಲಿ ಆರಂಭವಾದ ಈ ಚಿತ್ರದ ಚಿತ್ರೀಕರಣ ಬೆಂಗಳೂರು, ಕರಾವಳಿ ತೀರ ಸೇರಿದಂತೆ ಕರ್ನಾಟಕದ ರಮ್ಯ ತಾಣಗಳಲ್ಲಿ ನಡೆದಿದೆ.
ಯೋಗರಾಜ್ ಭಟ್ ಮೂವೀಸ್ ಅರ್ಪಿಸಿ ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಿಸಿರುವ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಸಂಭಾಷಣೆ ಬರೆದಿದ್ದಾರೆ. ಚಿತ್ರಕಥೆ ರಚಿಸುವಲ್ಲಿ ನಿರ್ದೇಶಕರಿಗೆ ಸೂರಿ ಸಾಥ್ ನೀಡಿದ್ದಾರೆ. ವಿ.ಹರಿಕೃಷ್ಣರ ಸಂಗೀತವಿರುವ ಈ ಚಿತ್ರಕ್ಕೆ ಸಂತೋಷ್ ರೈ ಪಾತಾಜೆ ಛಾಯಾಗ್ರಾಹಕರಾಗಿದ್ದಾರೆ. ಶಶಿಧರ್ ಅಡಪರ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ದೀಪು ಎಸ್ ಕುಮಾರ್ ಸಂಕಲನವಿದೆ. ಸುಬ್ರಹ್ಮಣ್ಯ.ಎಂ.ಕೆ ಕಾರ್ಯಕಾರಿ ನಿರ್ಮಾಪಕರಾಗಿರುವ ‘ಪರಮಾತ್ಮನ ನಾಯಕಿಯರಾಗಿ ದೀಪ ಸನ್ನಿಧಿ ಹಾಗೂ ಐಂದ್ರಿತಾ ರೇ ಅಭಿನಯಿಸಿದ್ದಾರೆ. ರಮ್ಯಾಬಾರ್ನಾ, ಶ್ವೇತಾ, ದತ್ತಣ್ಣ, ಅವಿನಾಶ್, ರಂಗಾಯಣರಘು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.