`ಸ್ತ್ರೀಶಕ್ತಿಗೆ` ಭರದ ಚಿತ್ರೀಕರಣ
Posted date: 15 Sat, Oct 2011 ? 09:31:05 AM

ಕಿಚ್ಚ ಸುದೀಪ್ ಅರ್ಪಿಸುವ, ಈಶಾ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಸ್ತ್ರೀಶಕ್ತಿ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.
      ತಂದೆತಾಯಿಯ ಅಪ್ಪಣೆ ಪಡೆದು ತಾನು ಪ್ರೀತಿಸಿದ ಹುಡುಗಿಯನ್ನೇ ಚಿತ್ರದ ನಾಯಕ ಮದುವೆಯಾಗುತ್ತಾನೆ. ಮದುವೆಯಾಗಿ ಮನೆಗೆ ಬಂದ ಮಗಸೊಸೆಯನ್ನು ಪೋಷಕರು ಸಂತೋಷದಿಂದ ಬರ ಮಾಡಿಕೊಳ್ಳುತ್ತಾರೆ. ಈ ಸನ್ನಿವೇಶವನ್ನು ನೆಲಮಂಗಲದ ಬಳಿಯಿರುವ ರವಿ ಎಸ್ಟೇಟ್‌ನಲ್ಲಿ ನಿರ್ದೇಶಕ ಎಸ್.ವಿ.ಸುರೇಶ್ ಚಿತ್ರಿಸಿಕೊಂಡರು. ರಾಜೀವ್, ಸೋನು, ಶರತ್‌ಲೋಹಿತಾಶ್ವಾ, ತುಳಸಿಶಿವಮಣಿ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.              
     ಎಸ್.ವಿ.ಸುರೇಶ್ ನಿರ್ಮಾಣದ ಈ ಚಿತ್ರಕ್ಕೆ ವಿ.ಮನೋಹರ್ ಸಂಗೀತ ನೀಡಿದ್ದಾರೆ. ಕೆ.ಶಶಿಧರ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜ್ ಸಂಕಲನ, ಹರ್ಷ ನೃತ್ಯ ನಿರ್ದೇಶನ, ಚಂದ್ರು ಸಾಹಸ ನಿರ್ದೇಶನ, ಅರುಣ್‌ಸಾಗರ್ ಕಲಾನಿರ್ದೇಶನವಿರುವ ಈ ಚಿತ್ರಕ್ಕೆ ಹೊ.ನ.ಸತ್ಯ ಕಥೆ, ಸಂಭಾಷಣೆ ಬರೆದಿದ್ದಾರೆ. ಅಚ್ಯುತರಾವ್ ಅವರ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ತಾರಾಬಳಗದಲ್ಲಿ ರಾಜೀವ್, ಸೋನು, ಸುಂದರರಾಜ್, ಗೋಪಿನಾಥ್‌ಭಟ್, ತುಳಸಿಶಿವಮಣಿ, ಕಾಶಿ, ರಾಮಕೃಷ್ಣ ಮುಂತಾದವರಿದ್ದಾರೆ. ವಿಶೇಷ ಪಾತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸುತ್ತಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed