ಇಂಡೋನೇಷಿಯಾಗೆ `ಆರಕ್ಷಕನ` ಪಯಣ
Posted date: 15 Sat, Oct 2011 ? 09:57:30 AM

ಪಿ.ವಾಸು ನಿರ್ದೇಶನದಲ್ಲಿ ಸೂಪರ್‌ಸ್ಟಾರ್ ಉಪೇಂದ್ರ ನಾಯಕರಾಗಿ ಅಭಿನಯಿಸುತ್ತಿರುವ ‘ಆರಕ್ಷಕ ಚಿತ್ರದ ಮೂರು ಹಾಡುಗಳ ಚಿತ್ರೀಕರಣಕ್ಕಾಗಿ ಚಿತ್ರತಂಡ ಇಂಡೋನೇಷಿಯಾಗೆ ಪ್ರಯಾಣ ಬೆಳೆಸಿದೆ. ಇಮ್ರಾನ್ ನೃತ್ಯ ನಿರ್ದೇಶನ ಮಾಡುವ ಈ ಹಾಡುಗಳ ಚಿತ್ರೀಕರಣದಲ್ಲಿ ಉಪೇಂದ್ರ, ರಾಗಿಣಿ, ಸದಾ ಭಾಗವಹಿಸುತ್ತಾರೆ.
      ಉದಯರವಿ ಫ಼ಿಲಂಸ್ ಲಾಂಛನದಡಿಯಲ್ಲಿ ಕೃಷ್ಣಪ್ರಜ್ವಲ್ ನಿರ್ಮಿಸುತ್ತಿರುವ  ಈ ಚಿತ್ರಕ್ಕೆ ಕೇರಳ, ಮೈಸೂರು, ಚೆನ್ನಪಟ್ಟಣ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ನಿರ್ದೇಶಕರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಗುರುಕಿರಣ್ ಸಂಗೀತವಿರುವ ಚಿತ್ರಕ್ಕೆ ಪಿ.ಕೆ.ಎಚ್ ದಾಸ್ ಅವರ ಛಾಯಾಗ್ರಹಣವಿದೆ. ಸುರೇಶ್ ಅರಸ್ ಸಂಕಲನ, ವೇಣು ಕಲಾ ನಿರ್ದೇಶನ, ಡಿಫ಼ರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮತ್ತು ಚಂಪಕಧಾಮ ಬಾಬು ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಸೀತಾ, ಸದಾ, ರಾಗಿಣಿ, ಶಯಾಜಿ ಶಿಂಧೆ, ಶರಣ್ ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed