ಸ್ಯಾಮಿ ಆಸೋಸಿಯೇಟ್ಸ್ ಲಾಂಛನದಲ್ಲಿ ಟಿ.ಪಿ.ಸಿದ್ದರಾಜು ಅವರು ನಿರ್ಮಿಸುತ್ತಿರುವ ‘ಸಿದ್ಲಿಂಗು ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಧರ್ಮಗಿರಿ ಶ್ರೀಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ದೇವರ ಮೇಲೆ ಸೆರೆ ಹಿಡಿಯಲಾದ ಚಿತ್ರದ ಪ್ರಥಮ ಸನ್ನಿವೇಶಕ್ಕೆ ನಿರ್ಮಾಪಕ ಕೆ.ಮಂಜು ಆರಂಭ ಫಲಕ ತೋರಿದರು. ಉದ್ಯಮದ ಗಣ್ಯರು ಹಾಗೂ ಚಿತ್ರತಂಡದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಯೋಗೇಶ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ರಮ್ಯ. ರಂಗಾಯಣರಘು, ಅಚ್ಯುತಕುಮಾರ್ ಸೇರಿದಂತೆ ಅನುಭವಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ರೋಹಿಣಿ ನಕ್ಷತ್ರ, ವೃಷಭ ರಾಶಿ ಎಂಬ ಅಡಿಬರಹದೊಂದಿಗೆ ನಿರ್ಮಾಣವಾಗುತ್ತಿರುವ ಈ ಚಿತ್ರದ ನಿರ್ದೇಶಕರು ವಿಜಯಪ್ರಸಾದ್. ಸಿಲ್ಲಿಲಲ್ಲಿ, ಪಾಪಪಾಂಡು ಮುಂತಾದ ಧಾರಾವಾಹಿಗಳನ್ನು ನಿರ್ದೇಶಿಸಿ ಅನುಭವವಿರುವ ನಿರ್ದೇಶಕರಿಗೆ ಹಿರಿತೆರೆಯಲ್ಲಿ ಇದು ಚೊಚ್ಚಲ ಚಿತ್ರ. ಡಿಸಂಬರ್ನಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.
ಐದು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ಸೀಳಿನ್ ಅವರ ಸಂಗೀತವಿದೆ. ಸುಜ಼್ಞಾನ್ ಛಾಯಾಗ್ರಹಣ, ಅರಸು ಅಂತಾರೆ, ವಿಜಯಪ್ರಸಾದ್ ಗೀತರಚನೆ, ಉದಯರವಿಹೆಗಡೆ ಸಂಕಲನ, ಮಧುಗಿರಿ ಪ್ರಕಾಶ್ ನಿರ್ಮಾಣ ನಿರ್ವಹಣೆ ಹಾಗೂ ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ ‘ಸಿದ್ಲಿಂಗು ಚಿತ್ರಕ್ಕಿದೆ.