ಇತ್ತೀಚಿನ ದಿನಗಳಲ್ಲಿಹಲವು ನಿರ್ದೇಶಕರು ತಮ್ಮ ವಿಭಿನ್ನ ರೀತಿಯ ಕಥೆಯನ್ನು ತೆರೆ ಮೇಲೆ ತರಲು ತಾವೇ ನಟನೆಗಿಳಿಯುತ್ತಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪೆಡೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಡಿ ಸತ್ಯಪ್ರಕಾಶ್.
ರಾಮಾ ರಾಮಾ ರೇ ಮತ್ತು ಒಂದಲ್ಲಾಎರಡಲ್ಲಾಸಿನಿಮಾಗಳ ಮೂಲಕ ಸ್ಯಾಂಡಲ್ವುಡ್ನ ಪ್ರತಿಭಾವಂತ ನಿರ್ದೇಶಕ ಎಂದು ಹೆಸರು ಮಾಡಿದ್ದ ಅವರು ತಮ್ಮ ಮೊದಲೆರೆಡು ಸಿನಿಮಾಗಳಿಗೆ ಚಿತ್ರಗಳಿಗೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಇವರ ನಿರ್ದೇಶನಲ್ಲಿ`ಮ್ಯಾನ್ ಆಫ್ ದಿ ಮ್ಯಾಚ್` ಎಂಬ ಸಿನಿಮಾ ಮೂಡಿ ಬಂದಿತ್ತು. ನಿರ್ದೇಶನದ ಜತೆಗೆ ತಮ್ಮದೇ ಬ್ಯಾನರ್ ನಲ್ಲಿ ನಿರ್ಮಾಣವನ್ನು ಸಹ ಮಾಡುವ ಸತ್ಯ ಸಿನಿಮಾಗಳ ವಿತರಣೆಯನ್ನು ಸಹ ಕಳೆದ ಒಂದೂವರೆ ವರ್ಷಗಳಿಂದ ಮಾಡುತ್ತಿದ್ದಾರೆ. ಈಗಾಗಲೇ 35ಕ್ಕೂ ಹೆಚ್ಚಿನ ಸಿನಿಮಾಗಳನ್ನು ಸತ್ಯ ಸಿನಿ ಡಿಸ್ಟ್ರಿಬ್ಯೂಟರ್ಸ್ ವತಿಯಿಂದ ವಿತರಿಸಿದ್ದಾರೆ. ಈಗ ಅವರು ತಮ್ಮ ಮುಂದಿನ ಸಿನಿಮಾವನ್ನು ನಿರ್ದೇಶನ ಮಾಡಲು ಸಜ್ಜಾಗಿದ್ದು, ಈ ಚಿತ್ರದಲ್ಲಿತಾವು ಸಹ ಒಂದ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ.
ಕೊಂಚ ಫ್ಯಾಂಟಸಿ ಮತ್ತು ಕಮರ್ಷಿಯಲ್ ಎಲಿಮೆಂಟ್ಗಳಿರುವ ಈ ಹೊಸ ಸಿನಿಮಾದಲ್ಲಿಫ್ರೆಶ್ ಆಗಿರುವ ನಕ್ಕು ನಗಿಸುವಂತಹ ಕಥೆಯನ್ನು ಸಿನಿಮಾದಲ್ಲಿ ಸತ್ಯಪ್ರಕಾಶ್ ಹೇಳಲಿದ್ದಾರೆ. ಈ ಚಿತ್ರದಲ್ಲಿಸತ್ಯಪ್ರಕಾಶ್ ಜತೆಗೆ ಅಥರ್ವ ಪ್ರಕಾಶ್ ಎಂಬ ಯುವಕ ಕೂಡಾ ನಟಿಸುತ್ತಿದ್ದಾರೆ. ಸತ್ಯಪ್ರಕಾಶ್ ಅವರೇ ನಿರ್ದೇಶನ ಮಾಡಿದ್ದ `ಮ್ಯಾನ್ ಆಫ್ ದಿ ಮ್ಯಾಚ್` ಸಿನಿಮಾದಲ್ಲಿ ಅಥರ್ವ ಪ್ರಕಾಶ್ ಒಂದು ಪ್ರಮುಖ ಪಾತ್ರವನ್ನು ನಿರ್ವಹಿಸಿ ಗಮನ ಸೆಳೆದಿದ್ದರು. ವಿಶೇಷ ಎಂದರೆ ಈ ಸಿನಿಮಾದಲ್ಲಿಸತ್ಯಪ್ರಕಾಶ್ ನಿರ್ದೇಶನ, ಮತ್ತು ಪ್ರಮುಖ ಪಾತ್ರದಲ್ಲಿಕಾಣಿಸಿಕೊಳ್ಳುವುದರ ಜತಗೆ ನಿರ್ಮಾಣವನ್ನು ಸಹ ತಮ್ಮ ಸತ್ಯಪಿಕ್ಚರ್ಸ್ ಬ್ಯಾನರ್ನಲ್ಲಿಮಾಡುತ್ತಿದ್ದಾರೆ. ಸದ್ಯಕ್ಕೆ ಸಿನಿಮಾ ಅನೌನ್ಸ್ಮೆಂಟ್ ಮಾತ್ರ ಈಗ ಮಾಡಿದ್ದು, ಸತ್ಯಪ್ರಕಾಶ್ ಅವರ ಹಿಂದಿನ ಸಿನಿಮಾಗಳಲ್ಲಿಕೆಲಸ ಮಾಡಿದ ತಂತ್ರಜ್ಞರ ತಂಡ ಈ ಚಿತ್ರದಲ್ಲಿಯೂ ಮುಂದುವರೆಯಲಿದೆ. ಸ್ಯಾಂಡಲ್ವುಡ್ನ ಪ್ರಮುಖ ಕಲಾವಿದರು ಈ ಸಿನಿಮಾದ ಭಾಗವಾಗಲಿದ್ದಾರೆ. ಸದ್ಯಕ್ಕೆ ಸಿನಿಮಾಗೆ ಇನ್ನೂ ಟೈಟಲ್ ಇಟ್ಟಿಲ್ಲ, ಸದ್ಯದಲ್ಲೇ ಸಣ್ಣ ಟೀಸರ್ ಮೂಲಕ ಟೈಟಲ್ ಅನ್ನುಅನೌನ್ಸ್ ಮಾಡಲಿದ್ದಾರಂತೆ. ಇನ್ನೊಂದು ವಿಶೇಷ ಎಂದರೆ ಸತ್ಯಪ್ರಕಾಶ್ ಕಥೆ ಬರೆದಿರುವ `ಕಾಲಾ ಪತ್ಥರ್` ಮತ್ತು `ಅನ್ಲಾಕ್ ರಾಘವ` ಇದೇ ವರ್ಷ ಬಿಡುಗಡೆಯಾಗಲಿದೆ. ಈ ಎರಡೂ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಒಂದು ನಿರೀಕ್ಷೆ ಇದೆ.
ಈಗ ಮಾಡಲು ಹೊರಟಿರುವ ಕಥೆಯನ್ನು ನಾನೇ ಬರೆದಿದ್ದೇನೆ. ಈ ಚಿತ್ರದಲ್ಲಿಎರಡು ಪ್ರಮುಖ ಪಾತ್ರಗಳು ಬರಲಿದ್ದು, ಒಂದನ್ನು ನಾನು ನಿರ್ವಹಿಸುತ್ತಿದ್ದೇನೆ. ಪಾತ್ರಕ್ಕೆ ನಾನು ಸೂಕ್ತವಾಗಿ ಹೊಂದಿಕೆಯಾಗುತ್ತೇನೆ ಎಂದು ಅನಿಸಿ ಮೇಲೆ ನಟನಾಗಲು ನಿರ್ಧರಿಸಿದೆ. ಈಗಾಗಲೇ ಅದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಳ್ಳುತ್ತಿದ್ದೇನೆ. ಪ್ರೇಕ್ಷಕರನ್ನು ನಕ್ಕು ನಗಿಸುತ್ತಾ ಒಂದು ಭಾವನಾತ್ಮಕ ಕಥೆಯನ್ನು ಈ ಚಿತ್ರದಲ್ಲಿಹೇಳುವ ಪ್ರಯತ್ನವಾಗಲಿದೆ. `ಎನ್ನುವುದು ಸತ್ಯಪ್ರಕಾಶ್ ಅವರ ಮಾತು.