ಮುಗೀತು ಟಾಕಿ. ಹಾಡಿನ ಚಿತ್ರೀಕರಣ ಬಾಕಿ
Posted date: 29/March/2010

     ಶ್ರೀಚಾಮುಂಡೇಶ್ವರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಬಿ.ಬಸವರಾಜು ಹಾಗೂ ಎ.ವೆಂಕಟೇಶ್ ನಿರ್ಮಿಸುತ್ತಿರುವ ಚಿತ್ರ ‘ಶೌರ್ಯ. ದರ್ಶನ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಹಾಡುಗಳ ಚಿತ್ರೀಕರಣ ಆರಂಭವಾಗಲಿದೆ.
    ಚಿತ್ರದ ಮೂರು ಹಾಡುಗಳ ಚಿತ್ರೀಕರಣ ಬಾಕಿಯಿದ್ದು, ಈ ಪೈಕಿ ಒಂದು ಗೀತೆ ಭಾರತದ ಪ್ರಸಿದ್ದ ಪ್ರವಾಸಿ ತಾಣ ಕುಲುಮನಾಲಿಯಲ್ಲಿ ಚಿತ್ರೀಕರಣಗೊಳ್ಳಲಿದ್ದು, ಮತ್ತೆರಡು ಗೀತೆಗಳ ಚಿತ್ರೀಕರಣ ವಿದೇಶದಲ್ಲಿ ನಡೆಯಲಿದೆ ಎಂದು ನಿರ್ದೇಶಕ ಸಾಧುಕೋಕಿಲಾ ತಿಳಿಸಿದ್ದಾರೆ.
     ನಿರ್ದೇಶಕ ಸಾಧುಕೋಕಿಲಾ ಚಿತ್ರದ ಸಂಗೀತ ನಿರ್ದೇಶಕರು ಹೌದು. ರಮೇಶ್‌ಬಾಬು ಛಾಯಾಗ್ರಹಣ, ಜೋನಿಹರ್ಷ ಸಂಕಲನ, ಕೆ.ವಿ.ರಾಜು ಸಂಭಾಷಣೆ, ಪಳನಿರಾಜ್, ರವಿವರ್ಮ ಸಾಹಸ, ಪ್ರದೀಪ್ ಅಂತೋಣಿ ನೃತ್ಯ, ಇಸ್ಮಾಯಿಲ್ ಕಲಾ ನಿರ್ದೇಶನ, ಸುನೀಲ್ ಪಾಳ್ಯ ಸಹ ನಿರ್ದೇಶನ ಹಾಗೂ ಅನಿಲ್‌ಕುಮಾರ್ ನಿರ್ಮಾಣ ನಿರ್ವಹಣೆಯಿರುವ ‘ಶೌರ್ಯ ಚಿತ್ರದ ತಾರಾಬಳಗದಲ್ಲಿ ದರ್ಶನ್, ರಿಮಾ ವರ್ಮ, ಮುಮೈತ್ ಖಾನ್, ಓಂಪ್ರಕಾಶ್, ಬುಲೆಟ್ ಪ್ರಕಾಶ್, ಸಂಪತ್‌ಕುಮಾರ್, ಜಾನ್‌ಕೋಕಿನ್, ಅವಿನಾಶ್, ರಮೇಶ್‌ಭಟ್, ಚಿತ್ರಾಶೆಣೈ ಮುಂತಾದವರಿದ್ದಾರೆ.


Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed