ಶ್ರೀಮತಿ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ಆಧಾರಿತ "ಶಾನುಭೋಗರ ಮಗಳು" ಚಿತ್ರದ ವಿಶೇಷ ಪಾತ್ರದಲ್ಲಿ ಬಹುಬಾಷಾ ನಟ ಕಿಶೋರ್ ಅಭಿನಯಿಸಲಿದ್ದಾರೆ.
ರಾಗಿಣಿ ಪ್ರಜ್ವಲ್ "ಶಾನುಭೋಗರ ಮಗಳಾ"ಗಿ ಕಾಣಿಸಿಕೊಳ್ಳುತ್ತಿದ್ದು, ಮೇಘಶ್ರೀ, ನಿರಂಜನ್ ಶೆಟ್ಟಿ, ರಮೇಶ್ ಭಟ್, ಸುಧಾ ಬೆಳವಾಡಿ, ಭಾಗ್ಯಶ್ರೀ,ಟಿ.ಎನ್.ಶ್ರೀನಿವಾಸಮೂರ್ತಿ, ಟೆನ್ನಿಸ್ ಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಈ ಚಿತ್ರದ ಚಿತ್ರೀಕರಣ ಅಕ್ಟೋಬರ್ 5ರ ವಿಜಯದಶಮಿ ಶುಭದಿನದಂದು ಚನ್ನಪಟ್ಟಣದ ಅರಳಾಳು ಸಂದ್ರದಲ್ಲಿ
ಆರಂಭವಾಗಲಿದೆ. ಆನಂತರ ಶ್ರೀರಂಗಪಟ್ಟಣ, ಮೇಲುಕೋಟೆ, ಕುಂತಿ ಬೆಟ್ಟ, ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.
ಭುವನ್ ಫಿಲಂಸ್ ಲಾಂಛನದಲ್ಲಿ ನಾರಾಯಣ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಕೋಡ್ಲು ರಾಮಕೃಷ್ಣ ನಿರ್ದೇಶಿಸುತ್ತಿದ್ದಾರೆ. ಇದು ಕೋಡ್ಲು ರಾಮಕೃಷ್ಣ ನಿರ್ದೇಶನದ ಹದಿನಾಲ್ಕನೇ ಕಾದಂಬರಿ ಆಧಾರಿತ ಚಿತ್ರ.
ಬಿ.ಎ.ಮಧು ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿರುವ ಈ ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಹಾಗೂ ವಸಂತ್ ರಾವ್ ಕುಲಕರ್ಣಿ ಅವರ ಕಲಾ ನಿರ್ದೇಶನವಿದೆ.