`ಮಾರಿಗುಡ್ಡದ ಗಡ್ಡಧಾರಿಗಳು` ಚಿತ್ರದ ಪೋಸ್ಟರ್ ಮತ್ತು ಶೀರ್ಷಿಕೆ ಗೀತೆಯು ಕುರುಬರಹಳ್ಳಿ ವೃತ್ತದಲ್ಲಿರುವ ಡಾ.ರಾಜ್ಕುಮಾರ್ ಪುತ್ಥಳಿ ಎದುರು ಅನಾವರಣಗೊಂಡಿತು. ಇದೇ ಸಂದರ್ಭದಲ್ಲಿ ಜಿಲ್ಲೆಗಳಿಗೆ ಪ್ರಚಾರ ಕೈಗೊಳ್ಳಲು ಟ್ಯಾಬ್ಲೊ ವಾಹನಕ್ಕೆ ಚಾಲನೆ ನೀಡಲಾಯಿತು.
ನಿರ್ಮಾಪಕ ಮತ್ತು ಮುಖ್ಯ ಪಾತ್ರ ಮಾಡಿರುವ ಸಲಗಸೂರಿಯಣ್ಣ ಮಾತನಾಡಿ ಕಟುಕನಿಗೂ ಒಳ್ಳೆಯ ಹೃದಯವಿರುತ್ತದೆ ಅಂತ ಸನ್ನಿವೇಶಗಳ ಮೂಲಕ ತೋರಿಸಲಾಗಿದೆ. ಕಷ್ಟಪಟ್ಟು ನಿರ್ಮಾಣ ಮಾಡಿದ್ದೇವೆ. ನಮ್ಮನ್ನು ಬೆಳಿಸಿರಿ ಅಂತ ಕೋರಿಕೊಂಡರು.
ನಿರ್ದೇಶಕ ರಾಜೀವ್ಚಂದ್ರಕಾಂತ್ ಹೇಳುವಂತೆ ವಿಲನ್ಗೋಸ್ಕರವೇ ಕಥೆ ಬರೆದಿರುವುದು ವಿಶೇಷ. 90ರ ಕಾಲಘಟ್ಟದಲ್ಲಿ ಕಾಲ್ಪನಿಕ ಮಾರಿಗುಡ್ಡ ಎಂಬ ಸ್ಥಳದಲ್ಲಿ ಗಡ್ಡಧಾರಿಗಳು ಅಲ್ಲಿನ ಜನರ ಹಣ, ವಸ್ತುಗಳನ್ನು ದೋಚುತ್ತಿರುತ್ತಾರೆ. ಮತ್ತೋಂದು ಟ್ರಾಕ್ದಲ್ಲಿ ಪ್ರೇಮಿಗಳ ಕಥೆಯೊಂದು ತೆರೆದುಕೊಳ್ಳುತ್ತದೆ. ಎಲ್ಲೋ ಒಂದು ಕಡೆ ಇವರೆಡು ಸೇರಿಕೊಳ್ಳುತ್ತದೆ. ಇದು ಒಂದು ಏಳೆಯ ಸಾರಾಂಶವಾಗಿದೆ. ಕೋಲಾರ, ನರಸಾಪುರಘಟ್ಟ, ಏರೋಹಳ್ಳಿ ಘಟ್ಟ, ಕೆಜೆಎಫ್ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ ಎಂಬುದಾಗಿ ಮಾಹಿತಿ ತೆರೆದಿಟ್ಟರು.
ನಾಯಕ ಪ್ರವೀಣ್, ನಾಯಕಿ ನಮ್ರತಾಅಗಸಿಮನಿ, ಸಂಗೀತ ಸಂಯೋಜಕ ಕೆ.ಎಂ.ಇಂದ್ರ, ಸಂಕಲನಕಾರ ಕೆ.ಎಂ.ವಿಶ್ವ ಸಂತಸ ಹಂಚಿಕೊಂಡರು. ತಾರಗಣದಲ್ಲಿ ಗಣೇಶ್ರಾವ್, ಬೆನಕ ನಂಜಪ್ಪ, ರಕ್ಷಿತ್, ನಂಜುಂಡ, ನಾಗಾವಿಜಯ್, ಶಾರುಣ್ಲೋಕೇಶ್, ಗಾಯಿತ್ರಿ, ಸೆಲ್ವಿ, ಬೇಬಿಮಾರಿಷ ನಟಿಸಿದ್ದಾರೆ. ಅಂದಹಾಗೆ ಸಿನಿಮಾವು ಏಪ್ರಿಲ್ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.