ಕಾಲಿವುಡ್ ಸ್ಟಾರ್ ನಟ ಸಿಲಂಬರಸನ್.ಟಿ.ಆರ್ ನಟನೆಯ `ಮಾನಾಡು` ತಮಿಳು ಚಿತ್ರವು ಐದು ಭಾಷೆಗಳಲ್ಲಿ ಸಿದ್ದಗೊಳ್ಳುತ್ತಿದೆ. ಕನ್ನಡದಲ್ಲಿ ಸುದೀಪ್, ತಮಿಳಿನಲ್ಲಿ ಎ.ಆರ್.ರೆಹಮಾನ್, ಹಿಂದಿಯಲ್ಲಿ ಅನುರಾಗ್ಕಶ್ಯಪ್, ತೆಲುಗುದಲ್ಲಿ ರವಿತೇಜ ಮತ್ತು ಮಲೆಯಾಳಂದಲ್ಲಿ ಪೃಥ್ವಿರಾಜ್ ಲೋಕಾರ್ಪಣೆ ಮಾಡಿದ್ದರು. ಸದ್ಯ ಕನ್ನಡದ `ರಿವೈಂಡ್`ಶೀರ್ಷಿಕೆ ಬದಲಾಗಿದ್ದು, ಮುಂದಿನ ದಿನಗಳಲ್ಲಿ ಹೊಸ ಹೆಸರನ್ನು ತಿಳಿಸುವುದಾಗಿ ತಂಡವು ಹೇಳಿಕೊಂಡಿದೆ. ಮೊನ್ನೆ ನಡೆದ ಚಿತ್ರೀಕರಣದಲ್ಲಿ ಆರು ನಿಮಿಷದ ಸಂಭಾಷಣೆಯನ್ನು ಒಂದೇ ಟೇಕ್ದಲ್ಲಿ ಮುಗಿಸಿ, ಎಲ್ಲರಿಗೂ ಸಿಲಂಬರಸನ್ ಅಚ್ಚರಿ ಮೂಡಿಸಿದ್ದು ಸುದ್ದಿಯಾಗಿದೆ.
ಪೊಲಟಿಕಲ್ ಡ್ರಾಮ ಕತೆ ಹೊಂದಿರುವ ಚಿತ್ರಕ್ಕೆ ರಚನೆ-ನಿರ್ದೇಶನ ವೆಂಕಟ್ಪ್ರಭು, ಸಂಗೀತ ಯುವನ್ಶಂಕರ್ರಾಜ, ಛಾಯಾಗ್ರಹಣ ರಿಚರ್ಡ್.ಎಂ.ನಾಥನ್, ಸಂಕಲನ ಪ್ರವೀಣ್.ಕೆ.ಎಲ್, ಸಾಹಸ ಸ್ವಂಟ್ಶಿವ, ನೃತ್ಯ ರಾಜುಸುಂದರಂ ಅವರದಾಗಿದೆ. ಸುರೇಶ್ಕಮತ್ಚಿ ಅವರು`ವಿ ಹೌಸ್ ಪ್ರೊಡಕ್ಷನ್`ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಕಲ್ಯಾಣಪ್ರಿಯದರ್ಶನ್ ನಾಯಕಿ. ಮತ್ತೋಂದು ಮುಖ್ಯ ಪಾತ್ರದಲ್ಲಿ ಎಸ್.ಜೆ.ಸೂರ್ಯ ಇವರೊಂದಿಗೆ ವೈ.ಜಿ.ಮಹೇಂದ್ರನ್, ವಾಗಿಚಂದ್ರಶೇಖರ್, ಅಂಜನಕೀರ್ತಿ, ಎಸ್.ಎ.ಚಂದ್ರಶೇಖರ್, ಉದಯ, ಮನೋಜ್.ಕೆ.ಭಾರತಿ, ಪ್ರೇಮ್ಗಿಅಮರೆನ್, ಡ್ಯಾನಿಯೆಲ್, ಕರುಣಾಕರನ್ ಮುಂತಾದವರು ನಟಿಸುತ್ತಿದ್ದಾರೆ.