ಗೋವಿಂದಾಯ ನಮಃ, ಶ್ರಾವಣಿ ಸುಬ್ರಮಣ್ಯ, ಶಿವಲಿಂಗ, ರಾಜು ಕನ್ನಡ ಮೀಡಿಯಂ ಸೇರಿದಂತೆ ಮೊದಲಾದ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಕೆ.ಎ.ಸುರೇಶ್ `ತೋತಾಪುರಿ`ಗೆ ಬಂಡವಾಳ ಹಾಕಿದ್ದಾರೆ. ಈ ಚಿತ್ರ ಎರಡು ಭಾಗವಾಗಿ ತೆರೆಕಾಣಲಿದ್ದು, ಮೊದಲ ಭಾಗಕ್ಕೆ `ತೊಟ್ಟ್ ಕೀಳ್ಬೇಕಷ್ಟೇ...` ಎಂಬ ಅಡಿಬರಹವಿದ್ದರೆ, ಎರಡನೇ ಭಾಗಕ್ಕೆ `ತೊಟ್ಟ್ ಕಿತ್ತಾಯ್ತು...`ಎಂಬ ಟ್ಯಾಗ್ಲೈ ನ್ ಇದೆ.
ತಾರಾಗಣದ ವಿಷಯದಲ್ಲೂ ಈ ಚಿತ್ರ ಸದ್ದು ಮಾಡಿದ್ದು, ಜಗ್ಗೇಶ್, ಅದಿತಿ ಪ್ರಭುದೇವ, ಡಾಲಿ ಧನಂಜಯ್, ದತ್ತಣ್ಣ, ಸುಮನ್ ರಂಗನಾಥ್, ವೀಣಾ ಸುಂದರ್, ಹೇಮಾದತ್ ಸೇರಿದಂತೆ ಸುಮಾರು 80ಕ್ಕೂ ಅಧಿಕ ಕಲಾವಿದರು ಪ್ರಮುಖ ತಾರಾಬಳಗದಲ್ಲಿದ್ದಾರೆ. ಬೆಂಗಳೂರು, ಮೈಸೂರು, ಮಡಿಕೇರಿ, ಕೇರಳ ಸೇರಿದಂತೆ ಸಾಕಷ್ಟು ಸ್ಥಳಗಳಲ್ಲಿ ಚಿತ್ರೀಕರಣವಾಗಿರುವ ಈ ಚಿತ್ರ ದಕ್ಷಿಣ ಭಾರತ ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಎರಡೂ ಭಾಗದ ಸ್ಕ್ರಿಪ್ಟ್ ರೆಡಿ ಮಾಡಿಕೊಂಡು ಒಂದೇ ಬಾರಿ ಎರಡೂ ಭಾಗದ ಶೂಟಿಂಗ್ ನಡೆಸಿದ ಕೀರ್ತಿ `ತೋತಾಪುರಿ`ಗೆ ಸಲ್ಲುತ್ತದೆ. 150ಕ್ಕೂ ಹೆಚ್ಚಿನ ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಜಗ್ಗೇಶ್ ಅವರ ಸಿನಿ ಕೆರಿಯರ್ ನಲ್ಲೇ ಇದೇ ಮೊದಲ ಬಾರಿಗೆ ಎರಡು ಭಾಗದ ಸಿನಿಮಾಕ್ಕೆ ಬಣ್ಣ ಹಚ್ಚಿದ್ದಾರೆ. ತೆರೆಯ ಮೇಲೆ ಕಮಾಲ್ ಮಾಡಲು ಸದ್ಯದಲ್ಲಿಯೇ ಹಾಜರಾಗಲಿದೆ `ತೋತಾಪುರಿ` ತಂಡ.