2014 ರಲ್ಲಿ ತೆರೆಕಂಡು ಅಪಾರ ಮೆಚ್ಚುಗೆ ಪಡೆದುಕೊಂಡಿದ್ದ ಚಿತ್ರ ``ದೃಶ್ಯ`` ಈಗ ಇದೇ ಚಿತ್ರದ ಮುಂದುವರೆದ ಭಾಗ `` ದೃಶ್ಯ 2``ಎಂಬ ಹೆಸರಿನಿಂದ ನಿರ್ಮಾಣವಾಗಿದ್ದು, ಈ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯುಎ ಅರ್ಹತಾ ಪತ್ರ ನೀಡಿದೆ. ಚಿತ್ರ
ಡಿಸೆಂಬರ್ 10 ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ.
ಪಿ.ವಾಸು ಅವರ ನಿರ್ದೇಶನದ ಈ ಚಿತ್ರದ ನಾಯಕರಾಗಿ ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿದ್ದಾರೆ. ಹಿರಿಯ ನಟ ಅನಂತನಾಗ್, ನವ್ಯ ನಾಯರ್,
ಪ್ರಭು ಶಿವಾಜಿ, ಸಾಧುಕೋಕಿಲ, ನೀತು ರೈ, ಪ್ರಮೋದ್ ಶೆಟ್ಟಿ, ಅಶೋಕ್, ಶಿವರಾಂ, ಉನ್ನತಿ, ಕೃಷ್ಣ ಯಟರ್ನ್, ನಾರಾಯಣ್ ಸ್ವಾಮಿ, ಲಾಸ್ಯ ನಾಗರಾಜ್, ಯತಿರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
E4 Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರ Zee ಸ್ಟುಡಿಯೋ ಮೂಲಕ ಬಿಡುಗಡೆಯಾಗುತ್ತಿದೆ. ಸಿ.ವಿ.ಸಾರಥಿ ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರಕ್ಕೆ ಜೀತು ಜೋಸೆಫ್ ಕಥೆ ಬರೆದಿದ್ದಾರೆ.
ಜಿ.ಎಸ್.ವಿ ಸೀತಾರಾಂ ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ , ರವಿ ಸಂತೆಹುಕ್ಲು ಅವರ ಕಲಾ ನಿರ್ದೇಶನ ಹಾಗೂ ಲೋಕೇಶ್ ಬಿಕೆ ಗೌಡ , ಭರತ್ ಅವರ ನಿರ್ಮಾಣ ನಿರ್ವಹಣೆ ``ದೃಶ್ಯ 2`` ಚಿತ್ರಕ್ಕಿದೆ.