ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ``ನೀ ಸಿಗೋವರೆಗೂ`` ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ದ್ವಿತೀಯ ಹಂತದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.
ಬೆಂಗಳೂರು, ಚಿಕ್ಕಮಗಳೂರು, ಜಮ್ಮು&ಕಾಶ್ಮೀರ ಹಾಗೂ ಯು ಎಸ್ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.
ಶಿವರಾಜಕುಮಾರ್ ಈ ಚಿತ್ರದಲ್ಲಿ ಆರ್ಮಿ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಹೊಸ ಲುಕ್ ದಸರಾದ ಶುಭ ಸಂದರ್ಭದಲ್ಲಿ ಅನಾವರಣಗೊಂಡಿದೆ. ಇದು ಶಿವರಾಜಕುಮಾರ್ ಅಭಿನಯದ ೧೨೪ ನೇ ಚಿತ್ರವೂ ಹೌದು.
ಭಾವನಾತ್ಮಕ ಪ್ರೇಮಕಥಾಹಂದರದ ಈ ಚಿತ್ರವನ್ನು ರಾಮ್ ಧೂಲಿಪುಡಿ ನಿರ್ದೇಶನ ಮಾಡುತ್ತಿದ್ದಾರೆ.
.
ಮೆರ್ಹಿನ್ ಫಿರ್ಜಾದ ನಾಯಕಿಯಾಗಿ ನಟಿಸುತ್ತಿದ್ದಾರೆ. ನಾಜರ್, ಸಾಧುಕೋಕಿಲ, ಸಂಪತ್ ಕುಮಾರ್, ಮಂಗ್ಲಿ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
" ಟಗರು " ಖ್ಯಾತಿಯ ಚರಣ್ ರಾಜ್ ಸಂಗೀತ ನಿರ್ದೇಶನ, ಮಹೇಂದ್ರ ಸಿಂಹ ಛಾಯಾಗ್ರಹಣ, ದೀಪು ಸಂಕಲನ ಹಾಗೂ ರವಿ ಸಂತೆಹಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ನರಾಲ ಶ್ರೀನಿವಾಸ್ ರೆಡ್ಡಿ ಶ್ರೀಕಾಂತ್ ಧುಲಿಪುಡಿ ಹಾಗೂ ಸ್ವಾತಿ ವನಪಲ್ಲಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
ಕುಡಿಪುಡಿ ವಿಜಯ್ ಕುಮಾರ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ "ನೀ ಸಿಗೋವರೆಗೂ" ಚಿತ್ರ ನಿರ್ಮಾಣವಾಗಲಿದೆ.